SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಆಂಧ್ರದಲ್ಲಿ ದೋಣಿ ಮುಳುಗಿ 12 ಮಂದಿ ಸಾವು; 40ಕ್ಕೂ ಹೆಚ್ಚು ಜನ ನಾಪತ್ತೆ,


15 andhra boat tragedy
ಆಂಧ್ರಪ್ರದೇಶ:
 ದೋಣಿ ಮುಳುಗಿ 12ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ನದಿಯಲ್ಲಿ ಘಟಿಸಿತು. ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದವು.

ಕಚ್ಚಲೂರು ಬಳಿಯ ಗೋದಾವರಿ ನದಿಯಲ್ಲಿ ಈ ದುರಂತ ಸಂಭವಿಸಿತು. ದೋಣಿಯಲ್ಲಿ ಒಟ್ಟು 63 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಯಿತು. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಯಿತು.  ಈವರೆಗೆ 23 ಮಂದಿಯನ್ನು ರಕ್ಷಿಸಲಾಯಿತು. ಸ್ಥಳಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​  ರೆಡ್ಡಿ ​ ಘಟನೆ ಬಗ್ಗೆ  ತನಿಖೆಗೆ ಆದೇಶಿಸಿ,  ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಪರಿಹಾರ ಘೋಷಿಸಿದರು. ಕೆಲವು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ಗೋದಾವರಿ ನದಿಗೆ 5 ಲಕ್ಷ ಕೂಸೆಕ್​ ನೀರನ್ನು ಬಿಡಲಾಗಿತ್ತು.

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ 11 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

September 15, 2019 - Posted by | ಭಾರತ, ರಾಷ್ಟ್ರೀಯ, Flash News, General Knowledge, India, Nation, News, Spardha |

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ