SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ದಕ್ಷಿಣ ಕನ್ನಡ ಶಾಲೆಗಳಿಗೆ ಅಕ್ಟೋಬರ್ 1ರಿಂದ 15ರ ತನಕ ದಸರಾ ರಜೆ


20 vedavyas
ಮಂಗಳೂರು
: ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ 2019 ಸೆಪ್ಟೆಂಬರ್ 20ರ ಶುಕ್ರವಾಋ ತಿಳಿಸಿದರು.

ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು.

September 20, 2019 - Posted by | ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ರಾಜ್ಯ, culture, Dakshina Kannada District, Festival, General Knowledge, Mangalore, News, Spardha | , ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ