SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಶ್ರೀನಗರದಲ್ಲಿ ಗ್ರೆನೆಡ್ ದಾಳಿ: ೮ ಜನರಿಗೆ ಗಾಯ


12 grenade attack-in-srinagar
ಶ್ರಿನಗರ:  ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 2019 ಅಕ್ಟೋಬರ್ 12ರ ಶನಿವಾರ ಶಂಕಿತ ಉಗ್ರಗಾಮಿಗಳು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಒಬ್ಬ ಮಹಿಳೆ ಸೇರಿದಂತೆ ಕನಿಷ್ಠ ೮ ಮಂದಿ ಗಾಯಗೊಂಡರು  ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಆಗಸ್ಟ್ ೫ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿ, ಜನ ಸಂಚಾರದ ಮೇಲೆ ನಿರ್ಬಂಧಗಳನ್ನು ವಿಧಿಸಿದ ಬಳಿಕ ಕಾಶ್ಮೀರ ಕಣಿವೆಯಲ್ಲಿ ಸಂಭವಿಸಿದ ಈ ಮಾದರಿಯ ಮೂರನೇ ಘಟನೆ ಇದಾಯಿತು.

ಶಂಕಿತ ಭಯೋತ್ಪಾದಕರು ಹರಿ ಸಿಂಗ್ ಹೈ ಸ್ಟ್ರೀಟಿನಲ್ಲಿ ಗ್ರೆನೇಡ್ ಎಸೆದಿದ್ದು, ಅದು ಲಾಲ್ ಚೌಕದಿಂದ ಕೆಲವು ನೂರು ಮೀಟರ್ ದೂರ ರಸ್ತೆ ಬದಿಯಲ್ಲಿ ಸ್ಫೋಟಗೊಂಡಿದೆ. ಈ ಸ್ಥಳವು ನಾಗರಿಕ ಸಚಿವಾಲಯ ಮತ್ತು ರಾಜ್ಯ ವಿಧಾನಸಭೆಗೆ ಸಮೀಪವಿರುವ ಸ್ಥಳವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿರ್ಬಂಧಗಳ ಹಿನ್ನೆಲೆಯಲ್ಲಿ ಅಂಗಡಿಗಳು ಮುಚ್ಚಿದ್ದು, ಪ್ರದೇಶದಲ್ಲಿ ಹಣ್ಣು ಮತ್ತು ಸೆಕೆಂಡ್ ಹ್ಯಾಂಡ್ ಬಟ್ಟೆಗಳನ್ನು ಮಾರುವ ವ್ಯಾಪಾರಿಗಳ ಕೈಗಾಡಿಗಳು ಇದ್ದವು ಎಂದು ಅವರು ಹೇಳಿದರು.

October 14, 2019 - Posted by | ಭಯೋತ್ಪಾದಕ, ಭಾರತ, ರಾಷ್ಟ್ರೀಯ, Flash News, General Knowledge, India, Nation, News, Pakistan, Spardha, Terror |

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ