SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಶ್ರೀನಗರ:  ಕೇಂದ್ರೀಯ ಮೀಸಲು ಭದ್ರತಾ ಪಡೆಯ ಮೇಲೆ ಗ್ರೆನೇಡ್,  6 ಸೈನಿಕರಿಗೆ ಗಾಯ


26 kashmir grenade attack
ನವದೆಹಲಿ
: ಜಮ್ಮು-ಕಾಶ್ಮೀರದ ಶ್ರೀನಗರದ ಕರಣ್ ನಗರದಲ್ಲಿ 2019 ಅಕ್ಟೋಬರ್ 26ರ  ಶನಿವಾರ ಸಂಜೆ ಉಗ್ರರು ಕೇಂದ್ರೀಯಮೀಸಲು ಪಡೆಯ (ಸಿಆರ್​ಪಿಎಫ್​) ಮೇಲೆ ಗ್ರೆನೇಡ್ ಮತ್ತು ಗುಂಡಿನ ದಾಳಿ ನಡೆಸಿದ ಪರಿಣಾಮ ಆರು ಸೈನಿಕರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದರು.

ಸಿಆರ್​ಪಿಎಫ್​ನ 144ನೇ ಬೆಟಾಲಿಯನ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸಂಜೆ 6.50ರ ಸಮಯದಲ್ಲಿ ಚೆಕ್​ಪಾಯಿಂಟ್​ ಬಳಿ ಸಿಆರ್​ಪಿಎಫ್​ ತಂಡದ ಮೇಲೆ ಈ ದಾಳಿ ನಡೆಯಿತು. ಗ್ರೆನೇಡ್ ಸ್ಫೋಟದಿಂದ ಸುತ್ತಮುತ್ತಲ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಉಗ್ರರ ದಾಳಿಗೆ ಭದ್ರತಾ ಪಡೆಯ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

October 26, 2019 - Posted by | ಪಾಕಿಸ್ತಾನ, ಭಯೋತ್ಪಾದಕ, ಭಾರತ, ರಾಷ್ಟ್ರೀಯ, Flash News, General Knowledge, Nation, News, Pakistan, Spardha | ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ