SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಜಮ್ಮುವಿನಲ್ಲಿ ಟ್ರಕ್​ ಚಾಲಕನ ಹತ್ಯೆ:  ಉಗ್ರನ ಸದೆಬಡಿದ ಸೇನೆ


29 terrorist-killed
ಜಮ್ಮು
:  ದಕ್ಷಿಣ ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಬಿಜ್​​ಬಿಹರಾ ಪ್ರದೇಶದಲ್ಲಿ 2019 ಅಕ್ಟೋಬರ್ 28ರ ಸೋಮವಾರ ಸಂಜೆ ಟ್ರಕ್​ ಚಾಲಕನನ್ನು ಹತ್ಯೆ ಮಾಡಿದ್ದ ಉಗ್ರನನ್ನು 2019 ಅಕ್ಟೋಬರ್ 29ರ ಮಂಗಳವಾರ  ನಡೆದ ಗುಂಡಿನ ಘರ್ಷಣೆಯಲ್ಲಿ ಸದೆಬಡಿಯಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದರು.

ಹತ್ಯೆಯಾದ ಉಗ್ರನ ಬಗ್ಗೆ ಈವರೆಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಬಂದೂಕುಧಾರಿಯಾಗಿದ್ದ ಉಗ್ರರು ಇಬ್ಬರು ಟ್ರಕ್ ಚಾಲಕರನ್ನು ಗುರಿಯಾಗಿಸಿದ್ದರು. ಅವರಲ್ಲಿ ಉಧಮ್​ಪುರದ ನಾರಾಯಣ್​ ದತ್​ ಉಗ್ರರ ದಾಳಿಗೆ ಬಲಿಯಾಗಿದ್ದು, ಮತ್ತೊಬ್ಬ ಟ್ರಕ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದ.

ಕಾಶ್ಮೀರೇತರರನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದು, ಕಳೆದೆರಡು ವಾರದಲ್ಲಿ ಉಗ್ರರ ದಾಳಿಗೆ ಒಟ್ಟು 6 ಟ್ರಕ್​ ಚಾಲಕರು ಬಲಿಯಾಗಿದ್ದಾರೆ. ಹಿಂದಿನ ದಿನ ಘಟನೆ ನಡೆದ ಬಳಿಕ ಸ್ಥಳದಲ್ಲಿ ಪೊಲೀಸರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಓರ್ವ ಉಗ್ರನನ್ನು ಹೊಡೆದುರುಳಿಸಲಾಯಿತು.

ನಾರಾಯಣ್​ ಸೋಮವಾರ ಸ್ಥಳೀಯ ಮಾರ್ಕೆಟ್​ನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಹಣ್ಣಿನ ಮಾರ್ಕೆಟ್ಟಿಗೆ  ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಉಗ್ರರು ಆತನನ್ನು ಹತ್ಯೆ ಮಾಡಿದ್ದರು.

ಹತ್ಯೆಯಾದ ಟ್ರಕ್​ ಚಾಲಕ ನಾರಾಯಣ್ ದತ್​ ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಚಾಲಕನ ಮೃತದೇಹವನ್ನು ಅವರ ಮನೆಗೆ ಕಳುಹಿಸಲಾಗಿತ್ತು.

October 29, 2019 - Posted by | ಭಯೋತ್ಪಾದಕ, ಭಾರತ, ರಾಷ್ಟ್ರೀಯ, Flash News, General Knowledge, India, Nation, News, Spardha, Terror | ,

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ