SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಭಯೋತ್ಪಾದನೆ ವಿರುದ್ಧ ಹೋರಾಟ:  ಭಾರತಕ್ಕೆ ಯುರೋಪ್ ಸಂಸದರ ಬೆಂಬಲ


30 eu law makers at kashmir
ಶ್ರೀನಗರ
: ಜಾಗತಿಕ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಐರೋಪ್ಯ ಒಕ್ಕೂಟದ ಸಂಸದರ ತಂಡ  2019 ಅಕ್ಟೋಬರ್ 30ರ ಬುಧವಾರ ಹೇಳಿತು.

ಜಮ್ಮು–ಕಾಶ್ಮೀರಕ್ಕೆ ಈದಿನ ಭೇಟಿ ನೀಡಿದ ಬಳಿಕ ಆಯ್ದ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ತಂಡದ ಸದಸ್ಯರು, ‘ನಾವು ಸುದೀರ್ಘ ವರ್ಷಗಳ ಹೋರಾಟದ ಬಳಿಕ ಶಾಂತಿ ನೆಲೆಸಿದ ಯುರೋಪ್‌ಗೆ ಸೇರಿದವರು. ಭಾರತವು ವಿಶ್ವದಲ್ಲೇ ಅತ್ಯಂತ ಶಾಂತಿಯುತ ರಾಷ್ಟ್ರವಾಗುವುದನ್ನು ಕಾಣಲು ನಾವು ಬಯಸುತ್ತೇವೆ. ಇದಕ್ಕಾಗಿ ನಾವು ಜಾಗತಿಕ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದ ಪರ ನಿಲ್ಲಲಿದ್ದೇವೆ. ಈ ಭೇಟಿಯು ಇಲ್ಲಿನ ವಾಸ್ತವದ ಅರಿವು ಮೂಡಿಸಿದೆ’ ಎಂದು ಹೇಳಿದರು.

‘ನಾವು ಭಾರತದ ನಾಗರಿಕರು ದೇಶದ ಇತರ ಎಲ್ಲ ನಾಗರಿಕರಂತೆ ಇರಲು ಬಯಸುತ್ತೇವೆ. ದೇಶದ ಇತರ ಪ್ರದೇಶಗಳಂತೆಯೇ ನಮ್ಮಲ್ಲೂ ಅಭಿವೃದ್ಧಿಯಾಗುವುದನ್ನು ಆಶಿಸುತ್ತೇವೆ ಎಂಬುದಾಗಿ ಸ್ಥಳೀಯರು ನಮ್ಮ ಬಳಿ ಹೇಳಿದ್ದಾರೆ’ ಎಂದು ಸಂಸದರೊಬ್ಬರು ತಿಳಿಸಿದರು.

ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ರದ್ದತಿಯು ಭಾರತದ ಆಂತರಿಕ ವಿಚಾರ ಎಂದೂ ತಂಡ ಹೇಳಿತು.

ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದ ಸಂಸದರ ನಿಯೋಗವನ್ನು ಬಿಗಿ ಭದ್ರತೆಯಲ್ಲಿ ದಾಲ್‌ ಸರೋವರ ಸೇರಿದಂತೆ ಹಲವು ಪ್ರದೇಶಗಳಿಗೆ ಕರೆದೊಯ್ಯಲಾಯಿತು.

October 30, 2019 - Posted by | ಭಯೋತ್ಪಾದಕ, ಭಾರತ, ರಾಷ್ಟ್ರೀಯ, Flash News, General Knowledge, India, Nation, News, Spardha, Terror |

No comments yet.

Leave a comment

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ