SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

೫.೪ ಲಕ್ಷ ಹಣತೆಗಳ ಬೆಳಕಿನಲ್ಲಿ ಅಯೋಧ್ಯೆ ಝಗಮಗ, ಹೊಸ ವಿಶ್ವದಾಖಲೆ ಸೃಷ್ಟಿ

This slideshow requires JavaScript.

ದೀಪೋತ್ಸವಕ್ಕೆ ಸಾಕ್ಷಿಯಾದ ಸಿಎಂ ಯೋಗಿ ಆದಿತ್ಯನಾಥ್

ನವದೆಹಲಿ/ ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಸರಯೂ ನದಿ ದಂಡೆಯಲ್ಲಿನ ’ರಾಮ್ ಕಿ ಪೈದಿ’2019 ಅಕ್ಟೋಬರ್ 26ರ  ಶನಿವಾರ ಬೆಳಕಿನ ಹಬ್ಬವಾದ ’ದೀಪೋತ್ಸವ’ದಲ್ಲಿ ೫ ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆಗಳ ದೀಪಗಳ ಬೆಳಕಿನಲ್ಲಿ ಝಗಮಗಿಸಿತು. ಇದರೊಂದಿಗೆ ಹೊಸ ವಿಶ್ವದಾಖಲೆಯೂ ಸೃಷ್ಟಿಯಾಯಿತು.

ರಾಜ್ಯದ ಬಿಜೆಪಿ ಸರ್ಕಾರವು ಆಯೋಜಿಸಿದ ದೀಪೋತ್ಸವದ ಅಂಗವಾಗಿ ಅಯೋಧ್ಯೆಯನ್ನು ಝಗಮಗಿಸುವಂತೆ ಮಾಡಿದ ಈ ಸಂಭ್ರಮಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಕ್ಷಿಯಾದರು.

ಈ ವರ್ಷದ ದೀಪೋತ್ಸವದಲ್ಲಿ ಫಿಜಿಯ ಸಚಿವೆ ವೀಣಾ ಭಟ್ನಾಗರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮೊದಲ ಹಣತೆಯನ್ನು ಬೆಳಗಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆಗೆ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮತ್ತು ರಾಜ್ಯ ಸರ್ಕಾರದ ಹಲವಾರು ಸಚಿವರು ಈ ಸಂದರ್ಭದಲ್ಲಿ ಹಾಜರಿದ್ದರು.

‘ಲಕ್ಷ ದೀಪೋತ್ಸವ’ವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಮಂದಿ ರಾಮ್ ಕಿ ಪೈದಿಯಲ್ಲಿ ಜಮಾಯಿಸಿದ್ದರು.

ಭಾರತೀಯ ಮೂಲದವರಾದ ಫಿಜಿಯ ಮಹಿಳೆಯರು, ಮಕ್ಕಳು ಮತ್ತು ದಾರಿದ್ರ್ಯ ನಿವಾರಣಾ ಸಹಾಯಕ ಸಚಿವೆ ವೀಣಾ ಭಟ್ನಾಗರ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಶುಕ್ರವಾರ ಸಂಜೆಯೇ ಲಕ್ನೋ ತಲುಪಿದ್ದರು. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆಗೆ ಸಂಕ್ಷಿಪ್ತ ಸಂಭಾಷಣೆ ನಡೆಸಿದರು.

೨೦೧೭ರ ಮಾರ್ಚ್ ತಿಂಗಳಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದ ೭ ತಿಂಗಳ ಬಳಿಕ, ಯೋಗಿ ಆದಿತ್ಯನಾಥ್ ಸರ್ಕಾರವು ೨೦೧೭ರ ಅಕ್ಟೋಬರಿನಲ್ಲಿ ಮೊತ್ತ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ದೀಪೋತ್ಸವವನ್ನು ಆಚರಿಸಿತ್ತು. ಕಳೆದ ವರ್ಷವೂ ದೀಪೋತ್ಸವ ನಡೆದಿತ್ತು. ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಕಿಮ್ ಜುಂಗ್-ಸೂಕ್ ಅವರು ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕಳೆದ ವರ್ಷ ೩೦೦,೧೫೨ ಹಣತೆಗಳನ್ನು ಬೆಳಗುವ ಮೂಲಕ ವಿಶ್ವದಾಖಲೆ ಸ್ಥಾಪಿಸಲಾಗಿತ್ತು. ಈ ವರ್ಷ ಈ ದಾಖಲೆಯನ್ನು ಮುರಿದು ಹೊಸ ಗಿನ್ನೆಸ್ ವಿಶ್ವದಾಖಲೆ ಸ್ಥಾಪಿಸುವ ಸಲುವಾಗಿ ಜಿಲ್ಲಾ ಆಡಳಿತವು ೫,೫೧,೦೦೦ ಮಣ್ಣಿನ ಹಣತೆಗಳನ್ನು ಬೆಳಗುವ ಕಾರ್‍ಯಕ್ರಮ ಹಮ್ಮಿಕೊಂಡಿತ್ತು.

ಯೋಜನೆಯ ಪ್ರಕಾರ ರಾಮ್ ಕಿ ಪೈದಿಯಲ್ಲಿ ಸುಮಾರು ೪ ಲಕ್ಷ ಮತ್ತು ದೇಗುಲ ನಗರಿಯ ಇತರ ಕಡೆಗಳಲ್ಲಿ ಉಳಿದ ಹಣತೆಗಳನ್ನು ಬೆಳಗಲಾಯಿತು.

ದೀಪೋತ್ಸವವನ್ನು ದಾಖಲಿಸಿಕೊಳ್ಳಲು ಗಿನ್ನೆಸ್ ವಿಶ್ವದಾಖಲೆಯ ತಂಡವೊಂದು ಕೂಡಾ ಅಯೋಧ್ಯೆಗೆ ಆಗಮಿಸಿತ್ತು.

ಹಣತೆಗಳನ್ನು ಬೆಳಗುವುದಕ್ಕೆ ಮುನ್ನ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ಶ್ರೀರಾಮನ ಟ್ಯಾಬ್ಲೋ ಮೆರವಣಿಗೆಯನ್ನೂ ನಡೆಸಲಾಯಿತು.

ಮಧ್ಯಪ್ರದೇಶ, ಜಾರ್ಖಂಡ್ ಮತ್ತು ರಾಜಸ್ಥಾನದಂತಹ ವಿವಿಧ ರಾಜ್ಯಗಳ ಕಲಾವಿದರು ದೀಪೋತ್ಸವಕ್ಕಾಗಿ ಶ್ರೀರಾಮ, ಶ್ರೀಕೃಷ್ಣ ಮತ್ತು ಹನುಮಾನ್ ವೇಷಗಳನ್ನು ಧರಿಸಿ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳ ಮೂಲಕ ಸಂಭ್ರಮಕ್ಕೆ ಕಳೆಗಟ್ಟಿದರು.

‘ಇಲ್ಲಿಗೆ ಬಂದಿರುವುದಕ್ಕೆ ಅತ್ಯಂತ ಖುಷಿಯಾಗುತ್ತಿದೆ. ಇದೊಂದು ಮಹಾನ್ ಅನುಭವ. ನಮಗೆ ಇಲ್ಲಿ ಹಲವಾರು ಮಂದಿಯನ್ನು ವಿವಿಧ ರಾಜ್ಯಗಳ ಕಲಾವಿದರನ್ನು ಭೇಟಿ ಮಾಡಲು ಸಾಧ್ಯವಾಯಿತು’ ಎಂದು ಕಲಾವಿದರೊಬ್ಬರು ಸುದ್ದಿ ಸಂಸ್ಥೆಯ ಬಳಿ ಮಾತನಾಡುತ್ತಾ ಹೇಳಿದರು.

ಅಮೋಘ ದೀಪೋತ್ಸವ ಸಂಭ್ರಮಕ್ಕಾಗಿ ಪ್ರದೇಶದ ನಿವಾಸಿಗಳಲ್ಲದೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರೂ ಆಗಮಿಸಿದ್ದರು.

‘ನಾವು ಇಲ್ಲಿಗೆ ಮಧ್ಯಪ್ರದೇಶದ ನೇಪಾನಗರದಿಂದ ಬಂದಿದ್ದೇವೆ. ದೀಪೋತ್ಸವದಲ್ಲಿ ಪಾಲ್ಗೊಂಡಿರುವುದು ನಮ್ಮಗೆ ಗೌರವದ ಸಂಗತಿಯಾಗಿದೆ. ನಾವು ಇಲ್ಲಿ ಭಗೋರಿಯಾ ಜಾನಪದ ನೃತ್ಯವನ್ನು ಪ್ರದರ್ಶಿಸುತ್ತಿದ್ದೇವೆ’ ಎಂದು ನೇಪಾನಗರ ಮೂಲಕ ನೃತ್ಯ ತಂಡದ ಅಧ್ಯಕ್ಷ ಮುಖೇಶ ದರ್ಬಾರ್ ಹೇಳಿದರು.

ಅಯೋಧ್ಯೆಯಲ್ಲಿ ಮೂರು ದಿನಗಳ ದೀಪೋತ್ಸವ ಸಂಭ್ರಮ ಗುರುವಾರ ಆರಂಭವಾಗಿತ್ತು. ಎರಡನೇ ದಿನ ಗುಪ್ತರ ಘಾಟ್ ಮತ್ತು ಭಜನಾಸ್ಥಳದಲ್ಲಿ ಹಲವಾರು ಸಾಂಸ್ಕೃತಿಕ ಕಾರ್‍ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂಡೋನೇಷ್ಯ ಮತ್ತು ನೇಪಾಳದ ಕಲಾವಿದರು ರಾಮಲೀಲಾ ಪ್ರದರ್ಶಿಸಿದರು.

ಬಿಹಾರದ ಜಾನಪದ ಗೀತೆಗಳೂ ಮತ್ತು ಛತ್ತಿಸ್ ಗಢದ ಜಾನಪದ ನೃತ್ಯ ಎರಡನೇ ದಿನದ ಪ್ರಮುಖ ಆಕರ್ಷಣೆಗಳಾಗಿದ್ದವು.

ದೀಪಾವಳಿಯ ದಿನವಾದ ಭಾನುವಾರ ರಾಮಕೋಟ್ ಪ್ರದೇಶದಲ್ಲಿನ ಎಲ್ಲ ದೇವಾಲಯಗಳು ಮತ್ತು ರಾಮಜನ್ಮಭೂಮಿ-ಬಾಬರಿ ಮಸೀದಿ ಆವರಣದ ಸುತ್ತಮುತ್ತಣ ಮನೆಗಳಲ್ಲಿ ಸಂತರು ೧,೫೦,೦೦ ಹಣತೆಗಳನ್ನು ಬೆಳಗಲಿದ್ದಾರೆ.

ರಾಮ ಜನ್ಮಭೂಮಿ ನ್ಯಾಸವು ವಿವಾದಿತ ನಿವೇಶನ ಮತ್ತು ಸುತ್ತಮುತ್ತಣ ಜಾಗದಲ್ಲಿ ದೀಪಾವಳಿಯಂದು ಹಣತೆ ಬೆಳಗಲು ಅನುಮತಿ ನೀಡುವಂತೆ ಫೈಜಾಬಾದ್ ವಿಭಾಗದ ಡಿವಿಷನಲ್ ಕಮೀಷನರ್ ಅವರ ಬಳಿ ಅನುಮತಿ ಕೋರಿತ್ತು. ಆದರೆ ಅದಕ್ಕೆ ಅನುಮತಿ ನಿರಾಕರಿಸಲಾಗಿತ್ತು.

October 26, 2019 Posted by | ಅಯೋಧ್ಯೆ, ಭಾರತ, ರಾಷ್ಟ್ರೀಯ, culture, Festival, Flash News, General Knowledge, India, Nation, News, Spardha, Temples, Temples, ದೇವಾಲಯಗಳು | , , , , , , , | Leave a comment

ಮಹಾಭಾರತದ ‘ದ್ರೌಪದಿ’ ಆಗಲಿದ್ದಾರೆ ದೀಪಿಕಾ ಪಡುಕೋಣೆ..!

25 deepika-padukone spardha web1ಇದು ದ್ರೌಪದಿ ದೃಷ್ಟಿಕೋನದ ‘ಮಹಾಭಾರತ’

ಮುಂಬೈ: ದ್ರೌಪದಿಯ ದೃಷ್ಟಿಕೋನದಿಂದ ‘ಮಹಾಭಾರತ’ ನಿರ್ಮಾಣವಾಗಲಿದ್ದು, ನಟಿ ದೀಪಿಕಾ ಪಡುಕೋಣೆ ಕೇಂದ್ರ ಪಾತ್ರವನ್ನು ನಿರ್ವಹಿಸಲಿದ್ದಾರೆ. ಅವರು ನಿರ್ಮಾಪಕ ಮಧು ಮಂತೇನಾ ಅವರೊಂದಿಗೆ ಕೈಜೋಡಿಸಿದ್ದಾರೆ ಮತ್ತು ಚಿತ್ರವನ್ನು ಸಹ ನಿರ್ಮಿಸಲಿದ್ದಾರೆ.

ಆಸಿಡ್ ದಾಳಿಯಿಂದ ಬದುಕುಳಿದ ಲಕ್ಷ್ಮಿ ಅಗರ್ವಾಲ್ ಅವರ ಜೀವನದಿಂದ ಪ್ರೇರಿತವಾದ “ಛಪಾಕ್” ಚಿತ್ರದೊಂದಿಗೆ ದೀಪಿಕಾ ನಿರ್ಮಾಪಕರಾಗಿದ್ದಾರೆ. ಅವರ ಎರಡನೆಯ ನಿರ್ಮಾಣವಾದ “ಮಹಾಭಾರತ” ದ್ರೌಪದಿಯ ಕಣ್ಣುಗಳ ಮೂಲಕ ಕಾಣಿಸಲಿದ್ದು, ಇದು ಪೌರಾಣಿಕ ಕಥೆಯನ್ನು ಹೊಸದಾಗಿ ತೆರೆಯಲಿದೆ.

“ದ್ರೌಪದಿಯ ಪಾತ್ರವನ್ನು ವಹಿಸುವುದಕ್ಕಾಗಿ ನಾನು ರೋಮಾಂಚನಗೊಂಡಿದ್ದೇನೆ ಮತ್ತು ಗೌರವಿಸಲ್ಪಟ್ಟಿದ್ದೇನೆ. ನಿಜವಾಗಿಯೂ  ಇದು ಜೀವಮಾನದ ಪಾತ್ರ ಎಂದು ನಾನು ನಂಬುತ್ತೇನೆ. ‘ಮಹಾಭಾರತ’ ಪೌರಾಣಿಕ ಕಥೆಗಳು ಮತ್ತು ಸಾಂಸ್ಕೃತಿಕ ಪ್ರಭಾವದ ಹಿನ್ನೆಲೆಯಲ್ಲಿ  ಜನಪ್ರಿಯವಾಗಿದೆ, ಜೀವನದ ಅನೇಕ ಪಾಠಗಳು ಸಹ ‘ಮಹಾಭಾರತ’ದಿಂದ ಹುಟ್ಟಿಕೊಂಡಿವೆ, ಆದರೆ ಅವೆಲ್ಲವೂ ಹೆಚ್ಚಾಗಿ ಅದರ ಪುರುಷರಿಂದ ಹುಟ್ಟಿಕೊಂಡವುಗಳು. ಈ ಪಾತ್ರವನ್ನು ಹೊಸ ದೃಷ್ಟಿಕೋನದಿಂದ ಹೇಳುವುದು ಆಸಕ್ತಿದಾಯಕವಷ್ಟೇ ಅಲ್ಲ ಮಹತ್ವ ಪೂರ್ಣ ಕೂಡಾ”ಎಂದು ದೀಪಿಕಾ ಹೇಳಿದ್ದಾರೆ.

‘ಮಹಾಭಾರತ’ವನ್ನು ಸರಣಿಗಳಾಗಿ ನಿರ್ಮಿಸಲಾಗುವುದು.  ಮೊದಲನೆಯದು 2021ರ ದೀಪಾವಳಿ ವೇಳೆಗೆ  ಬಿಡುಗಡೆಯಾಗಲಿದೆ.

‘ಮಹಾಭಾರತ ನಮಗೆಲ್ಲರಿಗೂ ಗೊತ್ತು. ಆದರೆ ನಮ್ಮ ದೇಶದ ಸಾಂಸ್ಕೃತಿಕ ಇತಿಹಾಸದಲ್ಲಿ ಅತ್ಯಂತ ಮಹತ್ವದ ನಾಯಕಿಯರಲ್ಲಿ ಒಬ್ಬರಾದ ದ್ರೌಪದಿಯ ದೃಷ್ಟಿಕೋನದಿಂದ ‘ಮಹಾಭಾರತ’ವನ್ನು ನಿರೂಪಿಸುವುದು  ನಮ್ಮ ಚಿತ್ರದ ಅನನ್ಯತೆಯಾಗಿದೆ’ ಎಂದು ಮಾಂಟೆನಾ ಹೇಳುತ್ತಾರೆ.

‘ಜೊತೆಗೆ ದೀಪಿಕಾ ಅವರು ಇಂದು ಅತಿದೊಡ್ಡ ಭಾರತೀಯ ನಟಿ ಮಾತ್ರವಲ್ಲ, ಆದರೆ ಈ ನಿರೂಪಣೆಯನ್ನು ಗಡಿಯಾಚೆಗೂ ಒಯ್ಯಬಲ್ಲವರು. ಅವರು ಅಲ್ಲದೇ ಇದ್ದಿದ್ದರೆ,  ನಾವು ಈ ಚಿತ್ರವನ್ನು ಅಂತಹ ಮಹತ್ವಾಕಾಂಕ್ಷೆಯ ಪ್ರಮಾಣದಲ್ಲಿ ನಿರ್ಮಿಸುತ್ತಿರಲಿಲ್ಲ’ ಎಂದೂ ಮಾಂಟೆನಾ  ಹೇಳಿದರು.

October 25, 2019 Posted by | ಕರ್ನಾಟಕ, ಭಾರತ, ಮನರಂಜನೆ, ರಾಜ್ಯ, ಸಿನಿಮಾ, culture, Entertrainment, Flash News, General Knowledge, India, Nation, News, Spardha | , , | Leave a comment

ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ

11 kadri gopalnath
ಬೆಂಗಳೂರು
: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ 2019 ಅಕ್ಟೋಬರ್ 11ರ ಶುಕ್ರವಾರ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು  ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು.  ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.

ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು, ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು.

ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿದ್ದವು.

ಕದ್ರಿ ಗೋಪಾಲನಾಥ್ ಅವರ ಬಗ್ಗೆ ಇನ್ನಷ್ಟು ಮಾಹಿತಿ:

ಕದ್ರಿ ಗೋಪಾಲನಾಥ್ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರು. ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ.

ಜೀವನ:

ಗೋಪಾಲನಾಥ್‌ರವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು. ತಾಯಿ ಗಂಗಮ್ಮನವರು.

ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು. ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಅವರು ಸ್ಯಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು. ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸೊಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು.

ಗುರು ಅನುಗ್ರಹ:

ಮುಂದೆ ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ವಿ. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್ ಅವರು ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.

ವಿಶ್ವದಾದ್ಯಂತ ಕಛೇರಿಗಳು:

ಗೋಪಾಲನಾಥರ ಪ್ರಥಮ ಕಾರ್ಯಕ್ರಮ ಮದ್ರಾಸಿನ ಚೆಂಬೈ ಮೆಮೋರಿಯಲ್ ಟ್ರಸ್ಟ್ನಲ್ಲಿ ನಡೆಯಿತು. ಅದು ಅವರಿಗೆ ಎಲ್ಲೆಡೆಯಿಂದ ಪ್ರಸಿದ್ಧಿ ತಂದಿತು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರೆಂದು ಪರಿಗಣಿತರಾದ ಗೋಪಾಲನಾಥರ ಕಚೇರಿಗಳು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿಯೇ ಅಲ್ಲದೆ ಉತ್ತರ ಭಾರತದ ಪ್ರತಿಷ್ಟಿತ ಉತ್ಸವ- ವೇದಿಕೆಗಳಲ್ಲಿ, ಬಿಬಿಸಿಯ ಆಹ್ವಾನದ ಮೇರೆಗೆ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ, ಫ್ರಾಗ್ ಜಾಸ್ ಫೆಸ್ಟಿವಲ್, ಬರ್ಲಿನ್ ಸಂಗೀತೋತ್ಸವ, ಮೆಕ್ಸಿಕೋದ ಸೆರ್ವಾಂಟಿನೊ ಉತ್ಸವ, ಲಂಡನ್‌ನ ಪ್ರೊಮೆನಾಡೊ, ಪ್ಯಾರಿಸ್‌ನ ಹೈಲ್ ಫೆಸ್ಟಿವಲ್ ಮುಂತಾದ ವಿಶ್ವ ಉತ್ಸವ-ವೇದಿಕೆಗಳಲ್ಲಿ ಕದ್ರಿಯವರ ಸ್ಯಾಕ್ಸೋಫೋನ್ ಮೊಳಗಿದೆ. ಯೂರೋಪ್, ಸ್ವಿಜರ್‌ಲ್ಯಾಂಡ್, ಯುನೈಟೆಡ್ ಕಿಂಗ್ಡಂ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕ್ವೆಟಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಹೀಗೆ ಅವರು ವಿಶ್ವದಾದ್ಯಂತ ಯಶಸ್ವಿ ಕಚೇರಿಗಳನ್ನು ನಿರಂತರವಾಗಿ ನಡೆಸಿಕೊಡುತ್ತಾಬಂದಿದ್ದಾರೆ.

ಸ್ಯಾಕ್ಸೊಫೋನ್ಗೆ ಮತ್ತೊಂದು ಹೆಸರು:

ಕದ್ರಿಯವರ ವಾದನ ಸದಾ ಕಾವಿನಿಂದ ಕೂಡಿರುವಂಥದು. ಅವರ ಕಛೇರಿ ಮೊದಲಿನಿಂದ ಕೊನೆಯವರೆಗೂ ರಂಜನೀಯ; ಸುನಾದದ ಅಲೆ! ಚೇತೋಹಾರಿ ವಿನಿಕೆ. ತನಿಯಾಗಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಕಲಾವಿದರೊಂದಿಗೆ ಜುಗಲ್‌ಬಂದಿ, ಪಾಶ್ಚಾತ್ಯ ವಾದ್ಯಗಳೊಂದಿಗೆ ಜಾಸ್, ಫ್ಯೂಷನ್ ಹೀಗೆ ವೈವಿಧ್ಯಪೂರ್ಣ ಕಾರ್ಯಕ್ರಮಗಳನ್ನು ಅವರು ನೀಡುತ್ತಾ ಬಂದಿದ್ದಾರೆ. ಕಚೇರಿಗಳಲ್ಲಷ್ಟೇ ಆಲ್ಲದೆ, ಅನೇಕ ವೈಶಿಷ್ಟ್ಯಪೂರ್ಣ ಆಲ್ಬಂಗಳಲ್ಲಿ ಸಹಾ ಅವರ ಸಂಗೀತ ಶ್ರೋತೃ-ಅಭಿಮಾನಿಗಳನ್ನು ತಣಿಸುತ್ತಿದೆ. ಇಂದು ವಿದೇಶಿ ಮೂಲದ ವಾದ್ಯ ಸ್ಯಾಕ್ಸೋಫೋನ್‌ಗೆ ಶಾಸ್ತ್ರೀಯ ಸಂಗೀತದ ವೇದಿಕೆಯ ಮೇಲೆ ಒಂದು ಗೌರವಾನ್ವಿತ ಸ್ಥಾನ ದೊರಕಿರುವುದು ಅವರ ಪ್ರತಿಭೆ, ಪರಿಶ್ರಮಗಳಿಂದಲೇ. ಹಾಗಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತದ ನಿಟ್ಟಿನಲ್ಲಿ ಸ್ಯಾಕ್ಸೊಫೋನ್ಗೆ ಇನ್ನೊಂದು ಹೆಸರೇ ಕದ್ರಿ ಗೋಪಾಲನಾಥ್. ಭಾರತದಲ್ಲಿ ಮತ್ತು ಹೊರಗೆ ಅನೇಕ ‘ಸಂಗೀತ-ಕಛೇರಿ’ಗಳನ್ನು ನಡೆಸುತ್ತಾ ಬಂದಿರುವ ‘ಕದ್ರಿ ಗೋಪಾಲನಾಥ್’ ಸ್ಯಾಕ್ಸೊಫೋನ್ ಚಕ್ರವರ್ತಿ ಎಂದೇ ಹೆಸರಾಗಿದ್ದಾರೆ.

ಕಾರ್ಗಿಲ್ ಯುದ್ಧ ಸಂತ್ರಸ್ತರಿಗೆ ಕೊಡುಗೆ:

ಚೆನ್ನೈನ ನಾರದ ಗಾನಸಭಾದಲ್ಲಿ ೪00 ಮಂದಿ ಕಲಾವಿದರೊಡನೆ ನಡೆಸಿಕೊಟ್ಟ ಕಾರ್ಯಕ್ರಮದಿಂದ ಬಂದ ಲಕ್ಷಾಂತರ ಹಣವನ್ನು ಕಾರ್ಗಿಲ್ ಯುದ್ಧ ನಿಧಿಗಾಗಿ ಗೋಪಾಲನಾಥರು ಸಮರ್ಪಿಸಿದವರು.

October 14, 2019 Posted by | Award, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ಭಾರತ, ಮಂಗಳೂರು, ರಾಜ್ಯ, ವಿಶ್ವ/ ಜಗತ್ತು, culture, Dakshina Kannada District, Entertrainment, Flash News, General Knowledge, India, Nation, News, Spardha, World | , , , | Leave a comment

ಅಮಿತಾಭ್ ಬಚ್ಚನ್ ಮುಡಿಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಗರಿ

24 amitabh bachchan
ನವದೆಹಲಿ
: ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆಗಾಗಿ ಕೇಂದ್ರ ಸರ್ಕಾರವು ಕೊಡುವ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಈ ಬಾರಿ ಬಾಲಿವುಡ್ ಚಿತ್ರರಂಗದ ಬಿಗ್ ಬಿ ಅಮಿತಾಭ್ ಬಚ್ಚನ್ ಆಯ್ಕೆಯಾದರು.

ಬಚ್ಚನ್  ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವ ಬಗ್ಗೆ  2019 ಸೆಪ್ಟೆಂಬರ್  24ರ ಮಂಗಳವಾರ ಟ್ವೀಟ್ ಮಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಎರಡು ತಲೆಮಾರುಗಳನ್ನು ರಂಜಿಸಿದ ಮತ್ತು ಸ್ಫೂರ್ತಿಯ ಸೆಲೆ, ಬೆಳ್ಳಿಪರದೆಯ ದಂತಕಥೆ ಅಮಿತಾಭ್ ಬಚ್ಚನ್ ಅವರು ಅವಿರೋಧವಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಡೀ ದೇಶ ಮತ್ತು ಅಂತರಾಷ್ಟ್ರೀಯ ಸಮುದಾಯಕ್ಕೆ ಇದು ಖುಷಿ ಕೊಡುವ ಸಂಗತಿ. ಅಮಿತಾಭ್ ಜಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದರು.

ಸಿನಿಮಾ ಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಲ್ಲಿ ಭಾರತ ಸರ್ಕಾರವು 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ನಟಿ ದೇವಿಕಾ ರಾಣಿ ಅವರಿಗೆ 1969ರಲ್ಲಿ 17ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮೊತ್ತ ಮೊದಲ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ವಿಶೇಷ ಎಂದರೆ ಇದೇ ವರ್ಷ ಅಮಿತಾಭ್ ಚೊಚ್ಚಲ ಸಿನಿಮಾ ಮೃಣಾಲ್ ಸೇನ್‍‍ರ ‘ಭುವನ್ ಶೋಮ್‌’ನಲ್ಲಿ ನಿರೂಪಕರಾಗಿ ಪರಿಚಿತರಾಗಿದ್ದರು. ಬಳಿಕ ತಮ್ಮ ವಿಶಿಷ್ಟ ಧ್ವನಿ ಹಾಗೂ ಅತ್ಯದ್ಭುತ ಡೈಲಾಗ್ ಡೆಲಿವರಿ ಮೂಲಕ ಅಪಾರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಸಂಪಾದಿಸಿದರು ಅಮಿತಾಭ್.

ಎಪ್ಪತ್ತರ ದಶಕದಲ್ಲಿ ಝಂಜೀರ್, ದೀವಾರ್ ಮತ್ತು ಶೋಲೆಯಂತಹ ಚಿತ್ರಗಳಲ್ಲಿನ ಅಮೋಘ ಅಭಿನಯದ ಮೂಲಕ ಆ್ಯಂಗ್ರಿ ಯಂಗ್ ಮ್ಯಾನ್ ಎಂದೇ ಗುರುತಿಸಿಕೊಂಡಿದ್ದವರು ಅಮಿತಾಭ್.

ಐದು ದಶಕಗಳ ತಮ್ಮ ವೃತ್ತಿ ಬದುಕಿನಲ್ಲಿ ಮರೆಯಲಾಗದ, ಅಚ್ಚಳಿಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ  ಅವರು ನಾಲ್ಕು ಸಲ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದರು.

ಭಾರತೀಯ ಚಿತ್ರರಂಗದ ದಿಗ್ಗಜರಾದ ವರನಟ ಡಾ.ರಾಜ್ ಕುಮಾರ್, ವಿನೋದ್ ಖನ್ನಾ, ಮನೋಜ್ ಕುಮಾರ್, ಶಶಿ ಕಪೂರ್, ಗುಲ್ಜಾರ್, ಸೌಮಿತ್ರ ಚಟರ್ಜಿ, ಕೆ ಬಾಲಚಂದರ್, ಡಿ ರಾಮಾನಾಯ್ಡು, ಮನ್ನಾ ಡೇ, ಶ್ಯಾಮ್ ಬೆನಗಲ್, ಆಡೂರ್ ಗೋಪಾಲಕೃಷ್ಣನ್, ಮೃಣಾಲ್ ಸೇನ್, ಯಶ್ ಚೋಪ್ರಾ, ಆಶಾ ಭೋಸ್ಲೆ, ಬಿ.ಆರ್ ಚೋಪ್ರಾ, ಸೇರಿದಂತೆ ಮುಂತಾದ ಹಲವಾರು ದಿಗ್ಗಜರು ಈ ಗೌರವಕ್ಕೆ ಪಾತ್ರರಾಗಿದ್ದರು.

ದಾದಾಸಾಹೇಬ್ ಫಾಲ್ಕೆ ಗೌರವಕ್ಕೆ ಪಾತ್ರರಾಗಿರುವ ಅಮಿತಾಭ್ ಬಚ್ಚನ್‌‍ರನ್ನು ಬಾಲಿವುಡ್ ಸೆಲೆಬ್ರಿಟಿಗಳಾದ ಕರಣ್ ಜೋಹಾರ್, ಅನಿಲ್ ಕಪೂರ್ ಟ್ವಿಟರ್‌‌ನಲ್ಲಿ ಅಭಿನಂದಿಸಿದರು.

ಕಳೆದ ವರ್ಷ 65ನೇ ರಾಷ್ಟ್ರೀಯ ಪ್ರಶಸ್ತಿ ಸಂದರ್ಭದಲ್ಲಿ ನಟ ವಿನೋದ್ ಖನ್ನಾ ಅವರಿಗೆ ಮರಣೋತ್ತರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅಮಿತಾಭ್ ಬಚ್ಚನ್ ಇದುವರೆಗೆ ತಮ್ಮ ವೃತ್ತಿ ಬದುಕಿನಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2015ರಲ್ಲಿ ತೆರೆಕಂಡ ‘ಪಿಕು’ ಚಿತ್ರದಲ್ಲಿನ ಅಮೋಘ ಅಭಿನಯಕ್ಕಾಗಿ ಕೊನೆಯದಾಗಿ ಅವರಿಗೆ ರಾಷ್ಟ್ರ ಪ್ರಶಸ್ತಿ ದಕ್ಕಿತ್ತು.

ಸದ್ಯಕ್ಕೆ ಅಭಿತಾಭ್ ಅವರು ಕಿರುತೆರೆಯ ಜನಪ್ರಿಯ ಗೇಮ್ ಶೋ ಕೌನ್ ಬನೇಗಾ ಕರೋಡ್‌ಪತಿ ಸೀಸನ್ 11 ನಿರೂಪಕರಾಗಿದ್ದಾರೆ. ಜೊತೆಗೆ ಬದ್ಲಾ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾದಲ್ಲೂ ಅಭಿನಯಿಸುತ್ತಿದ್ದಾರೆ.

September 24, 2019 Posted by | Award, ಭಾರತ, ರಾಷ್ಟ್ರೀಯ, ವಿಮಾನ, Cinema, Education, Flash News, General Knowledge, India, Nation, Spardha | , , , , , , , , | Leave a comment

ಫಾರ್ಚೂನ್‌ ಇಂಡಿಯಾ ಅತಿ ಪ್ರಭಾವಿ ಮಹಿಳೆಯರ ಪಟ್ಟಿಗೆ ಅನುಷ್ಕಾ ಶರ್ಮ

22 Anushka-Sharma
ನವದೆಹಲಿ
: ನಿಯತಕಾಲಿಕೆ ಫಾರ್ಚೂನ್‌ ಇಂಡಿಯಾ ತಯಾರಿಸಿರುವ “2019ನೇ ಸಾಲಿನ ಭಾರತದ 50 ಅತಿ ಪ್ರಭಾವಿ ಮಹಿಳೆಯರ ಪಟ್ಟಿ’ಯಲ್ಲಿ ಬಾಲಿವುಡ್‌ ನಟಿ ಅನುಷ್ಕಾ ಶರ್ಮ (31) ಸ್ಥಾನ ಪಡೆದರು.

ತಮ್ಮ 25ನೇ ವಯಸ್ಸಿನಲ್ಲೇ ಕ್ಲೀನ್‌ ಸ್ಲೇಟ್‌ ಫಿಲ್ಮ್ಸ್ ಎಂಬ ಸಂಸ್ಥೆ ಹುಟ್ಟುಹಾಕಿದ್ದ ಅನುಷ್ಕಾ, ಈವರೆಗೆ ಅದರಿಂದ ಮೂರು ಪುಟ್ಟ ಬಜೆಟ್‌ನ ಚಿತ್ರಗಳನ್ನು ತಯಾರಿಸಿದ್ದಾರೆ. ನೆಟ್‌ಫ್ಲಿಕ್ಸ್‌ ಜತೆಗೆ ಒಪ್ಪಂದ ಮಾಡಿಕೊಂಡು ಟೆಲಿ ಚಲನಚಿತ್ರ, ವೆಬ್‌ಸರಣಿಗಳನ್ನು ನಿರ್ಮಿಸಿದ್ದಾರೆ.

“ನಶ್‌’ ಎಂಬ ತಮ್ಮದೇ ಆದ ಸಿದ್ಧ ಉಡುಪು ತಯಾರಿಕಾ ಸಂಸ್ಥೆಯನ್ನು ಸ್ಥಾಪಿಸಿರುವ ಅವರು, ಮೈಂತ್ರಾ, ಲ್ಯಾವಿ, ನಿವಿಯಾ ಹಾಗೂ ಎಲ್‌ 18ನಂಥ ಪ್ರತಿಷ್ಠಿತ ಕಂಪನಿಗಳ ಪ್ರಚಾರ ರಾಯಭಾರಿಯೂ ಆಗಿದ್ದಾರೆ.

ಹೀಗೆ, ವಾಣಿಜ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿರುವುದರ ಜತೆಗೆ, ಸಾಂಸ್ಕೃತಿಕ ಪ್ರತಿನಿಧಿಯಂತೆ ಜನರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನೂ ಗಳಿಸಿರುವ ಕಾರಣಕ್ಕಾಗಿ ಅನುಷ್ಕಾರನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ ಎಂದು ಫಾರ್ಚೂನ್‌ ಇಂಡಿಯಾ ಹೇಳಿತು.

September 22, 2019 Posted by | ಆರ್ಥಿಕ, ಭಾರತ, ರಾಷ್ಟ್ರೀಯ, ವಿಶ್ವ/ ಜಗತ್ತು, Cinema, Consumer Issues, Finance, Flash News, General Knowledge, India, Nation, News, Spardha, World | , , | Leave a comment

ಬಾಲಿವುಡ್‌ ನಟಿ ಆಲಿಯಾ ಭಟ್‌ ಮುಡಿಗೆ ‘ಐಫಾ‘ ಪ್ರಶಸ್ತಿ

19 alia-bhatt-
ನವದೆಹಲಿ
: 20ನೇ ಸಾಲಿನ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ; ‘ಐಫಾ’) ಪ್ರಶಸ್ತಿಗಳನ್ನು 2019 ಸೆಪ್ಟೆಂಬರ್ 19ರ ಗುರುವಾರ ನೀಡಲಾಗಿದ್ದು ಆಲಿಯಾ ಭಟ್‌ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು..

ನಟ ವಿಕ್ಕಿ ಕೌಶಲ್‌ ಹಾಗು ಆಲಿಯಾ ಭಟ್‌ ಅಭಿನಯದ ರಾಝಿ ಸಿನಿಮಾ ಉತ್ತಮ ಚಿತ್ರ ಪಶಸ್ತಿ ಪಡೆದುಕೊಂಡಿತು.

ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಬಾಲಿವುಡ್‌ ನಟ ಜಗದೀಪ್‌ ಜೆಫ್ರಿ ಅವರಿಗೆ ಜೀವಮಾನ ಶ್ರೇಷ್ಠ ಪಶಸ್ತಿ ನೀಡಿ ಗೌರವಿಸಲಾಯಿತು.

ಮುಂಬೈನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಾಲಿವುಡ್‌ ಚಿತ್ರರಂಗದ ಸಾಧಕರಿಗೆ ಐಫಾ ಪ್ರಶಸ್ತಿಗಳನ್ನು ನೀಡ ಗೌರವಿಸಲಾಯಿತು. ಆಲಿಯಾ ಭಟ್‌, ರಣವೀರ್ ಸಿಂಗ್‌, ಅದಿತಿ ರಾವ್‌ ಹೈದರಿ, ಸಾರಾ ಆಲಿ ಖಾನ್‌ ಐಫಾ ಪ್ರಶಸ್ತಿಗಳನ್ನು ಪಡೆದ ಪ್ರಮುಖರು. ಈ ಸಮಾರಂಭದಲ್ಲಿ ಸಲ್ಮಾನ್‌ ಖಾನ್‌, ಕತ್ರಿನಾ ಕೈಫ್‌, ಮಾಧುರಿ ದೀಕ್ಷಿತ್‌, ಪ್ರೀತಿ ಜಿಂಟಾ, ರಿತೇಶ್‌ ದೇಶ್‌ಮುಖ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಐಫಾ ಪ್ರಶಸ್ತಿ ಪಡೆದವರ ವಿವರ

* ಅತ್ಯುತ್ತಮ ಚಿತ್ರ: ರಾಝಿ

* ಅತ್ಯುತ್ತಮ ಕಥೆ: ಅಂಧಾಧುನಾ

* ಅತ್ಯುತ್ತಮ ನಟಿ: ಆಲಿಯಾ ಭಟ್‌ (ರಾಝಿ)

*ಅತ್ಯುತ್ತಮ ನಟ: ರಣವೀರ್‌ ಸಿಂಗ್‌ (ಪದ್ಮಾವತಿ)

*ಅತ್ಯುತ್ತಮ ನಿರ್ದೇಶಕ: ಶ್ರೀರಾಮ್‌ ರಾಘವನ್‌ (ಅಂಧಾಧುನಾ)

*ಅತ್ಯುತ್ತಮ ಪೋಷಕ ನಟಿ: ಅದಿತಿ ರಾವ್‌ ( ಪದ್ಮಾವತಿ)

*ಅತ್ಯುತ್ತಮ ಪೋಷಕ ನಟ: ವಿಕ್ಕಿ ಕೌಶಲ್‌ (ಸಂಜು)

* ಪಾದರ್ಪಣೆಯ ಉತ್ತಮ ನಟಿ: ಸಾರಾ ಆಲಿ ಖಾನ್‌

* ಪಾದರ್ಪಣೆಯ ಉತ್ತಮ ನಟ: ಇಶಾನ್ ಖಟ್ಟೆರ್‌

* ಅತ್ಯುತ್ತಮ ಗೀತ ರಚನೆ: ಅಮಿತಾಬ್‌ ಬಚನ್‌ (ದಡಕ್‌)

* ಜೀವಮಾನ ಶ್ರೇಷ್ಠ ಪ್ರಶಸ್ತಿ: ಜಗದೀಪ್‌ ಜಫ್ರಿ

September 19, 2019 Posted by | ಭಾರತ, Cinema, Entertrainment, Flash News, General Knowledge, India, Nation, News, Spardha | , , | Leave a comment

AN OASIS OF ARTWORK IN AMBAGILU…!

AN OASIS OF ARTWORK IN AMBAGILU..!

They came, they painted and they enjoyed at `Varna Sparsha’, organized here to popularize skin painting among children. The event was organized by ˜Gere Bare’, a drawing school, at Amabagilu near Udupi as part of their fourth anniversary celebration recently.

Jeevan Shetty, artist, cartoonist and director of the school, said children were thrilled to take part in the event. “They thoroughly enjoyed the unique way of expression of art,” he said.

Variety of butterflies, flowers, fruits, cartoons, jokers as well as scary characters figured in the art work. Artists Balu, Jagadish, Farooq and principal of Gere Bare Sudhindra Gavaskar showed their talents.

Known for its unique way of teaching art and creativity, the art school has also conducted art shows and free art camps for children and budding artists in Udupi.

Manipal Journal, an online web journal carried this report by Vrinda Manocha, recently and ‘Gere Bare’ blog presented whole event in very attractive way. One must visit this blog to look in to the talants of budding artists.

For beautiful views of Camp click the image above or vist:

http://gerebare.blogspot.com/

Nethrakere Udaya Shankara

January 27, 2010 Posted by | Cartoon World, culture, Festival, News, Spardha, Uncategorized | , , , , | 2 Comments

   

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ